ಶನಿವಾರ, ಸೆಪ್ಟೆಂಬರ್ 6, 2014

ಬಯಕೆಗಳನ್ಹೊತ್ತ ಬೆಟ್ಟದಂಚಿನಲಿ ಕೂತು ಕಾಯುತಿರುವೆ 
ಮುಸುಕು ಆಕೃತಿಯ ಮುರಳಿದನಿಕಂಡರೆ
ದ್ವೈತ ಮರೆತು ಐಕೈತೆಯಲಿ ಗಾನಸ್ಪರ್ಶಕಷ್ಟೇ ಸ್ಪಂದಿಸುವಾಸೆಯಾಗಿದೆ!

ಉಫ್.. ಸಮಭಾವವಿದಿದ್ದರೆ ಸಂಜೆಹೊತ್ತಿನಲಿ ಸೆಳೆದೆತ್ತೆತ್ತ ಒಯ್ಯುತಿದ್ದೆನೋ ನಾ ಕಾಣೆ!

ಜುಯ್ ಗಾಳಿಯೊಡನೆ ತೇಲಿ 
ಅಪ್ಪುವಾಸೆ ಭೋರ್ಗರೆತದಲಿ ಕೊಚ್ಚಿ ಹೋಗುವ ಮುನ್ನ ಬರಬಾರದೆ
ನಾನಿನ್ನೂ
ಬಯಕೆಗಳನ್ಹೊತ್ತ ಬೆಟ್ಟದಂಚಿನಲಿ ಕೂತು ಕಾಯುತಿರುವೆ..

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ