ಶುಕ್ರವಾರ, ಸೆಪ್ಟೆಂಬರ್ 5, 2014

ಸಂಕಲ್ಪಕೆ ಬಿದ್ದ ಹೂ ..


ಇದ್ದಿದ್ದರೆ ಮರದಲ್ಲೇ 
ಮತ್ತಷ್ಟು ನಗುತ್ತಾ ಅರಳುತಿದ್ದೆಯೇನೋ !

ಕರಗಿ ಮಾಯವಾಗೋಣವೆಂದರೆ
ಬಿದ್ದಿರುವುದಾದರು ನುಣುಪು ಜಾರಿನ ಸೀಮೆಂಟು ನೆಲದಲ್ಲಿ
ನೆಲೆಯೂರುವ ತೃಷೆ ನಗೆಪಾಟಲಿಗೆ.
ನಗುವರ ಹಲ್ಲಿಗೆಂದೂ ಹೆದರಿಲ್ಲ
ಹೆದರಿಸಿರುವುದು ಅವರಿವರ ಬೂಟು ಚಪ್ಪಲಿಗಳ ಸದ್ದು .

ಗುಡಿ ಸೇರುವೆನೆಂದರೆ 
ಅರ್ಹತೆಯ ಮಾತಾಡಿ ಮಿಂಡೆ ಎಂದಿತು ಕಲ್ಲು ಶಿಲೆ .
ಅಳೂ
ಕರುಣೆ ಬಂದೀತು ಕಲ್ಲಿಗೆ ಎಂದರು
ರೆಪ್ಪೆಯು ಅಲುಗಲಿಲ್ಲ ಯಾಕೋ 
ರೋದನೆಯಂತು ಸೂರ್ಯ ಸಮುದ್ರದ ಅಂತರದಷ್ಟೇ
ಮೂಳೆ ಮಾಂಸದ ಅಣುವಿನೊಳಗೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ