ಇದ್ದಿದ್ದರೆ ಮರದಲ್ಲೇ
ಮತ್ತಷ್ಟು ನಗುತ್ತಾ ಅರಳುತಿದ್ದೆಯೇನೋ !
ಕರಗಿ ಮಾಯವಾಗೋಣವೆಂದರೆ
ಬಿದ್ದಿರುವುದಾದರು ನುಣುಪು ಜಾರಿನ ಸೀಮೆಂಟು ನೆಲದಲ್ಲಿ
ನೆಲೆಯೂರುವ ತೃಷೆ ನಗೆಪಾಟಲಿಗೆ.
ನಗುವರ ಹಲ್ಲಿಗೆಂದೂ ಹೆದರಿಲ್ಲ
ಹೆದರಿಸಿರುವುದು ಅವರಿವರ ಬೂಟು ಚಪ್ಪಲಿಗಳ ಸದ್ದು .
ಗುಡಿ ಸೇರುವೆನೆಂದರೆ
ಅರ್ಹತೆಯ ಮಾತಾಡಿ ಮಿಂಡೆ ಎಂದಿತು ಕಲ್ಲು ಶಿಲೆ .
ಅಳೂ
ಕರುಣೆ ಬಂದೀತು ಕಲ್ಲಿಗೆ ಎಂದರು
ರೆಪ್ಪೆಯು ಅಲುಗಲಿಲ್ಲ ಯಾಕೋ
ರೋದನೆಯಂತು ಸೂರ್ಯ ಸಮುದ್ರದ ಅಂತರದಷ್ಟೇ
ಮೂಳೆ ಮಾಂಸದ ಅಣುವಿನೊಳಗೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ